ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆಗೆ ಶರಣು

Update: 2019-09-03 11:33 GMT

ಶಿವಮೊಗ್ಗ, ಆ. 3: ಜಿಲ್ಲೆಯ ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಅನಾರೋಗ್ಯ ಕಾರಣದಿಂದ ಇಬ್ಬರು ಪುರುಷರು, ಓರ್ವ ಮಹಿಳೆ ಸೇರಿ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. 

ಶಿವಮೊಗ್ಗ ವರದಿ: ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಗ್ರಾಮದ ಉಪ್ಪಾರಕೇರಿಯ ನಿವಾಸಿ ಮೀನಾಕ್ಷಮ್ಮ (52) ಎಂಬುವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. 

ಮತ್ತೊಂದು ಘಟನೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಗಾನೆ ರೆಡ್ಡಿ ಕ್ಯಾಂಪ್ ಏರಿಯಾದ ನಿವಾಸಿ ಶ್ರೀನಿವಾಸ (60) ಎಂಬುವರು ಮನೆಯ ಪಕ್ಕದ ಶೆಡ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಭದ್ರಾವತಿ ವರದಿ: ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಕ್ಕಿಪಿಕ್ಕಿ ಕ್ಯಾಂಪ್‍ನ ನಿವಾಸಿ ಅರುಣ್ (30) ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News