ಕೇಂದ್ರದಿಂದ ಅಧಿಕಾರ ದುರುಪಯೋಗ: ಡಾ.ಜಿ.ಪರಮೇಶ್ವರ್

Update: 2019-09-03 11:55 GMT

ಬೆಂಗಳೂರು, ಸೆ.3: ಕೇಂದ್ರ ಸರಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರವು ಸೃಷ್ಟಿಸಿರುವ ತೀವ್ರ ಆರ್ಥಿಕ ಅವ್ಯವಸ್ಥೆಯನ್ನು ಪರಿಹರಿಸುವ ಬದಲು, ವಿರೋಧ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ಧಿಜೀವಿಗಳ ವಿರುದ್ಧ ತನ್ನ ಗಮನ ಕೇಂದ್ರೀಕರಿಸಿದೆ ಎಂದಿದ್ದಾರೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ನಡೆಸಿಕೊಳ್ಳುತ್ತಿರುವುದು ಲಜ್ಜೆಗೆಟ್ಟ ರೀತಿಯಲ್ಲಿ ಇದೆ. ಜೊತೆಗೆ ಇದು ಪ್ರತೀಕಾರಕವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಪರಮೇಶ್ವರ್ ಟ್ವೀಟ್‌ನಲ್ಲಿ ಕಿಡಿಗಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News