ಡಿಕೆಶಿಗೆ ಕಿರುಕುಳ ನೀಡಲಾಗುತ್ತಿದೆ: ರಾಮಲಿಂಗಾ ರೆಡ್ಡಿ

Update: 2019-09-04 12:03 GMT

ಹೊಸದಿಲ್ಲಿ, ಸೆ.4: ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ಹೊಸದಿಲ್ಲಿಯ ರಾಮ ಮನೋಹರ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬಂಧಿಸಿದ್ದು ರಾಜಕೀಯ ಪ್ರೇರಿತ ಎಂದು ದೂರಿದರು.

ನಾವು ಮೊದಲಿನಿಂದಲೂ ಹೇಳಿದ್ದೇವೆ. ಈಗಲೂ ಅದೇ ನಿಲುವನ್ನು ಪುನರುಚ್ಚರಿಸುತ್ತಿರುವುದಾಗಿ ತಿಳಿಸಿದ ಅವರು, ಸರಕಾರದ ಆಸ್ತಿಪಾಸ್ತಿ ನಷ್ಟ ಮಾಡುವುದು ಸರಿಯಲ್ಲ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಶಾಂತಿಯುತ ರೀತಿಯಲ್ಲಿ ಪ್ರತಿಭಟಿಸುವಂತೆ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News