ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಬೆಂಬಲಿಗರಿಂದ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ

Update: 2019-09-04 13:01 GMT

ಚಾಮರಾಜನಗರ, ಸೆ.4: ಚಾಮರಾಜನಗರ ಜಿಲ್ಲೆಯಲ್ಲಿ, ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಬೆಂಬಲಿಗರು ಸಾಮೂಹಿಕವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎನ್.ಮಹೇಶ್ ಬಿಎಸ್ಪಿಯಿಂದ ಕಳೆದ ವಿಧಾನ ಸಭೆ ಚುನಾವಣೆಯಿಂದ ಗೆಲುವು ಸಾಧಿಸಿ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಮೈತ್ರಿ ಸರ್ಕಾರ ಬಹುಮತ ಸಾಬೀತು ವೇಳೆಯಲ್ಲಿ ಪಾಲ್ಗೊಳ್ಳದ ಕಾರಣಕ್ಕಾಗಿ ಅವರನ್ನು ಬಿಎಸ್ಪಿ ವರಿಷ್ಟೆ ಮಾಯಾವತಿ ಪಕ್ಷದಿಂದ ಉಚ್ಚಾಟಿಸಿದ್ದರು.

ಬುಧವಾರ ಚಾಮರಾಜನಗರದ ವರ್ತಕರ ಭವನದಲ್ಲಿ ಬಿಎಸ್ಪಿ ತಾಲೂಕು ಘಟಕ ಅಧ್ಯಕ್ಷ ಆಲೂರು ಮಲ್ಲು ನೇತೃತ್ವದಲ್ಲಿ ಬಿಎಸ್ಪಿ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಬಿಎಸ್ಪಿ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News