ಆತ ನನ್ನ ಪುತ್ರ ಸಮಾನ: ಬೆಂಬಲಿಗನ ಕೆನ್ನೆಗೆ ಹೊಡೆದ ಘಟನೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

Update: 2019-09-04 14:35 GMT

ಬೆಂಗಳೂರು, ಸೆ.4: ಮಾಜಿ ಸಿಎಂ ಸಿದ್ದರಾಮಯ್ಯ ಅವರು ತನ್ನ ಬೆಂಬಲಿಗರೊಬ್ಬರಿಗೆ ಕೆನ್ನೆಗೆ ಹೊಡೆದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಂದನಹಳ್ಳಿ ರವಿ ನಾನು ಬೆಳೆಸಿದ ಯುವ ನಾಯಕ. ನನಗೆ‌ ಆತ ಪುತ್ರ ಸಮಾನ ಎಂದು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂತಹ ನೂರಾರು ಯುವಕರು ನನ್ನ ಜತೆ ಇರ್ತಾರೆ. ಅವರ ಜೊತೆ ಪ್ರೀತಿ-ಕೋಪದ ಸಂಬಂಧ ನನ್ನದು.‌ ಅವನಿಗೆ ಹುಸಿಕೋಪದಿಂದ ಕೆನ್ನೆಗೆ ಹೊಡೆದಿದ್ದೆ. ಅದಕ್ಕೆ ವಿಪರೀತಾರ್ಥ ಕಲ್ಪಿಸುವ ಅಗತ್ಯ ಇಲ್ಲ. ರವಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾನೆ ಎಂದು ತಿಳಿಸಿದ್ದಾರೆ.

ಇಂದು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬುಧವಾರ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹೊರಹೋಗುವ ವೇಳೆ ಬೆಂಬಲಿಗನ್ನೊಬ್ಬ ಅವರ ಬಳಿಗೆ ಆಗಮಿಸಿ ಫೋನ್ ನೀಡಿದ್ದು, ಇದರಿಂದ ಕೋಪಗೊಂಡ ಸಿದ್ದರಾಮಯ್ಯ ಬೆಂಬಲಿಗನ ಕಪಾಳಕ್ಕೆ ಹೊಡೆದಿದ್ದಾರೆ. ಈ ಘಟನೆಯ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News