ರಸ್ತೆ ಅಪಘಾತಕ್ಕೆ ಎಎಸ್ಸೈ ಬಲಿ

Update: 2019-09-04 16:38 GMT

ಬೆಂಗಳೂರು, ಸೆ.4: ಶರವೇಗವಾಗಿ ಬಂದ ಟೆಂಪೊ ಢಿಕ್ಕಿ ಹೊಡೆದು ಕರ್ತವ್ಯ ನಿರತ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಎಎಸ್ಸೈ)ಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಯಲಹಂಕ ಬಳಿ ನಿನ್ನೆ ರಾತ್ರಿ ನಡೆದಿದೆ.

ಯಲಹಂಕದ ಪೊಲೀಸ್ ವಸತಿ ನಿಲಯದಲ್ಲಿ ವಾಸಿಸುತ್ತಿದ್ದ ವೆಂಕಟರಾಮು (55) ಮೃತ ಎಎಸ್ಸೈ ಎಂದು ತಿಳಿದುಬಂದಿದೆ.

ಮಂಗಳವಾರ ರಾತ್ರಿ ವೇಳೆ ಕರ್ತವ್ಯದ ಮೇಲೆ ಜಕ್ಕೂರು ಸರ್ವೀಸ್ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವೆಂಕಟರಾಮು ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಸೇರಿ ಮೂವರು ಮಕ್ಕಳಿದ್ದಾರೆ. ಪೊಲೀಸ್ ಇಲಾಖೆಯಿಂದ ಎಎಸ್ಸೈವರೆಗೆ 30 ವರ್ಷಗಳಿಗೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು, ಟೆಂಪೊ ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News