ಅಬ್ಬಾಸ್ ಉಸ್ತಾದ್ ಸಂಸ್ಮರಣಾ ಕಾರ್ಯಕ್ರಮ: ಯಶಸ್ವಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಎಸ್ಸೆಸ್ಸೆಫ್ ಕರೆ

Update: 2019-09-04 17:40 GMT

ಮಂಗಳೂರು, ಸೆ.4: ಕರ್ನಾಟಕ  ಸುನ್ನೀ ಕೋ-ಆರ್ಡಿನೇಶನ್ ಸಮಿತಿಯ ವತಿಯಿಂದ ಸೆ. 7 ರಂದು ಶೈಖುನಾ ಅಬ್ಬಾಸ್ ಉಸ್ತಾದ್ ಸಂಸ್ಮರಣಾ ಕಾರ್ಯಕ್ರಮವು ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದ್ದು, ಕಾರ್ಯಕರ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಕರೆ ನೀಡಿದ್ದಾರೆ.

ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ರವರು ಕನ್ನಡ ನಾಡು ಕಂಡ ಧೀಮಂತ ವಿದ್ವಾಂಸರಾಗಿದ್ದು, ಹಲವಾರು ವರ್ಷಗಳಿಂದ ಕರ್ನಾಟಕ ಸುನ್ನಿ ಕೋ-ಆರ್ಡಿನೇಶನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಘಿಕ, ಸಾಮಾಜಿಕ ನಾಯಕರು, ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದು, ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News