ಪರಿಶಿಷ್ಟ ವರ್ಗಕ್ಕೆ ಕೋಳಿ ಸಮಾಜ ಸೇರ್ಪಡೆಗೆ ಕೇಂದ್ರಕ್ಕೆ ಮನವಿ: ಯಡಿಯೂರಪ್ಪ

Update: 2019-09-05 14:38 GMT

ಬೆಂಗಳೂರು, ಸೆ.5: ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಈ ಬಗ್ಗೆ  ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದರು.

ಮಾಜಿ ಸಚಿವರಾದ ಮಾಲಿಕಯ್ಯ ಗುತ್ತೇದಾರ್ ಹಾಗೂ ಡಾ.ಎ.ಬಿ ಮಾಲಕರೆಡ್ಡಿ ಇವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಕಲಬುರಗಿ ಜಿಲ್ಲೆಯ ವಿವಿದ ಸಮಸ್ಯೆಗಳು ಹಾಗೂ ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ  ಮಾಡುವ ಬಗ್ಗೆ ಚರ್ಚಿಸಿದರು.  

ಸಂಸದ ಉಮೇಶ್ ಜಾದವ್, ಮಾಲಿಕಯ್ಯ ಗುತ್ತೇದಾರ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News