ವಾಹನ ಢಿಕ್ಕಿ: ಪಾದಾಚಾರಿ ಮೃತ್ಯು

Update: 2019-09-06 18:28 GMT

ಅಜೆಕಾರು, ಸೆ.6: ಗಣೇಶೋತ್ಸವದ ವಿಸರ್ಜನಾ ಕಾರ್ಯಕ್ರಮವನ್ನು ಮುಗಿಸಿ ಮನೆಯತ್ತ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯೊಬ್ಬರಿಗೆ ಪಿಕ್‌ಅಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ದೊಂಡೇರಂಗಡಿ ಕುಕ್ಕುಜೆ ಬಳಿ ಸೆ.3ರಂದು ರಾತ್ರಿ ನಡೆದಿದೆ.

ಕುಕ್ಕುಜೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನರಸಿಂಹ ಆಚಾರಿ ಅವರು ರಾತ್ರಿ 9 ಗಂಟೆ ಸುಮಾರಿಗೆ ದೊಂಡೆರಂಗಡಿ ಬಳಿ ಇಳಿದು ನಡೆದುಕೊಂಡು ಹೋಗುತಿದ್ದಾಗ ಕಡ್ತಲ ಕಡೆಯಿಂದ ವೇಗವಾಗಿ ಧಾವಿಸಿ ಬಂದ ಪಿಕ್‌ಅಪ್ ವಾಹನ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ನರಸಿಂಹ ಆಚಾರಿ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತು.

ರಸ್ತೆಗೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡ ಅವರನ್ನು ಕೂಡಲೇ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಅವರು ಮರುದಿನ ರಾತ್ರಿ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಅಜೆಕಾರು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News