ಕಬಿನಿಗೆ ಬಾಗಿನ: ಕಾವೇರಿ ನೀರಾವರಿ ನಿಗಮ ಅಳವಡಿಸಿದ ಬ್ಯಾನರ್ ನಲ್ಲಿ ಸಿಎಂಗೆ ಇಲ್ಲ ಸ್ವಾಗತ!

Update: 2019-09-07 06:54 GMT

ಮೈಸೂರು, ಸೆ.7: ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶನಿವಾರ ಬಾಗಿನ ಅರ್ಪಿಸಲಾಯಿತು. ಬಾಗಿನ ಅರ್ಪಿಸಲು  

 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸುವ ಹಿನ್ನೆಲೆಯಲ್ಲಿ ಅವರಿಗೆ ಸ್ವಾಗತ ಕೋರುವ ಬ್ಯಾನರ್ ಹಾಕುವ ಬದಲು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣರಿಗೆ ಮಾತ್ರ ಸ್ವಾಗತ ಕೋರುವ ಬ್ಯಾನರ್ ಅಳವಡಿಸುವ ಕಾವೇರಿ ನೀರಾವರಿ ನಿಗಮ  ಯಡವಟ್ಟು ಮಾಡಿಕೊಂಡಿದೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಅರ್ಪಿಸಿದರು. ಇದೇ ವೇಳೆ ಅವರು ಬಾಗಿನ ಅರ್ಪಿಸುವ ಸ್ಥಳದಲ್ಲಿಯೇ ನೀರನ್ನು ಹೊರಬಿಡುವ ಕ್ರಷ್ ಗೇಟಿನ ಮೇಲೆ ಕಾವೇರಿ ನೀರಾವರಿ ನಿಗಮದ ವತಿಯಿಂದ ಕಬಿನಿ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣರಿಗೆ ಸ್ವಾಗತ ಎಂಬ ಬ್ಯಾನರ್ ಅನ್ನು ಅಳವಡಿಸಲಾಗಿತ್ತು. ಆದರೆ ಮುಖ್ಯಮಂತ್ರಿಗೆ ಸ್ವಾಗತ ಕೋರುವ ಯಾವ ಬ್ಯಾನರ್ ಅನ್ನು ಹಾಕದಿರುವುದು ಚರ್ಚೆಗೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News