ಬಿಎಂಟಿಸಿ ಬಸ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು
Update: 2019-09-07 16:06 GMT
ಬೆಂಗಳೂರು, ಸೆ.7: ವೇಗವಾಗಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಹರಿದು 9ನೆ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಮಾಗಡಿ ಮುಖ್ಯರಸ್ತೆಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ.
ಅಗ್ರಹಾರ ದಾಸರಹಳ್ಳಿಯ ಆಯುಷ್(14) ಮೃತ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯನಗರದ ಆರ್ಚಿಡ್ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ 9ನೇ ತರಗತಿ ಓದುತ್ತಿದ್ದ ಆಯುಷ್, ರಾತ್ರಿ 8ರ ವೇಳೆ ಮನೆಯ ಮುಂಭಾಗ ರಸ್ತೆ ದಾಟುತ್ತಿದ್ದಾಗ ವೀರೇಶ ಚಿತ್ರಮಂದಿರದ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಹರಿದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಯುಷ್ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಪ್ರಕರಣ ದಾಖಲಿಸಿರುವ ವಿಜಯನಗರ ಸಂಚಾರ ಠಾಣಾ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.