ಕಾಲುಜಾರಿ ಕೆರೆಗೆ ಬಿದ್ದು ಯುವಕ ಮೃತ್ಯು

Update: 2019-09-07 17:12 GMT

ಕೆ.ಆರ್.ಪೇಟೆ, ಸೆ.7: ಉಳುಮೆ ನಂತರ ದನಗಳಿಗೆ ಕೆರೆಯಲ್ಲಿ ನೀರು ಕುಡಿಸಲು ಹೋಗಿದ್ದ ಯುವಕನೊಬ್ಬ ಕಾಲುಜಾರಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಂಗೇಗೌಡರ ಮಗ ಡಿ.ಆರ್.ಕಾರ್ತಿಕ್(23) ಮೃತ ಯುವಕ. ಈತ ಶುಕ್ರವಾರ ಬೆಳಗ್ಗೆ ದನಗಳೊಂದಿಗೆ ತಮ್ಮ ಜಮೀನನ್ನು ಉಳುಮೆ ಮಾಡಿ, ನಂತರ ನೀರು ಕುಡಿಸಿ ಮೈತೊಳೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ರಂಗೇಗೌಡ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬೇಟಿ ನೀಡಿದ್ದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಶೋಕ್, ರೈತ ಸಂಜೀವಿನಿ ಯೋಜನೆ ಅಡಿಯಲ್ಲಿ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಮೃತರ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಎಸ್ಸೈ ಈರೇಗೌಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News