ಕೊಲ್ಲೂರು: ಡಿಕೆಶಿ ಶೀಘ್ರ ಬಿಡುಗಡೆಗೆ ಚಂಡಿಕಾಹೋಮ

Update: 2019-09-09 06:14 GMT

ಉಡುಪಿ: ಡಿಕೆಶಿ ಶೀಘ್ರ ಬಿಡುಗಡೆ ಆಗುವಂತೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಚಂಡಿಕಾಹೋಮ ನಡೆಯಿತು.

ಡಿಕೆಶಿ ಸಂಬಂಧಿಕರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಡಿಕೆಶಿ ಅವರ ಫೋಟೊ ಮುಂದಿಟ್ಟು ಚಂಡಿಕಾಹೋಮ ನಡೆಯಿತು.

ಈ ಸಂದರ್ಭ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News