ಕೊಡಗು ಜಿಲ್ಲಾಧಿಕಾರಿ ಒಂದು ವಾರ ಅಲಭ್ಯ: ಸೆ.16 ರಿಂದ ಕರ್ತವ್ಯಕ್ಕೆ ಹಾಜರು

Update: 2019-09-09 12:49 GMT

ಮಡಿಕೇರಿ, ಸೆ.9 : ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮೂರು ದಿನ ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದು, ಉಳಿದ ಮೂರು ದಿನ ರಜೆಯಲ್ಲಿರುತ್ತಾರೆ ಎಂದು ತಿಳಿದು ಬಂದಿದೆ.

ಜಿಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಂಭವಿಸಿದ ಪ್ರಾಕೃತಿಕ ವಿಕೋಪದ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಜಿಲ್ಲಾಧಿಕಾರಿಗಳು ದಿಢೀರ್ ಆಗಿ ರಜೆಯಲ್ಲಿ ತೆರಳಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಊಹಾಪೋಹಗಳು ಕೇಳಿ ಬಂದಿದ್ದವು. ಜಿಲ್ಲಾಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ, ಕೆಲವರು ಒತ್ತಡ ಹೇರಿದ ಕಾರಣ ರಜೆಯಲ್ಲಿ ತೆರಳಿದ್ದಾರೆ ಎಂದೆಲ್ಲ ಗಾಳಿ ಸುದ್ದಿ ಹಬ್ಬಲು ಆರಂಭವಾಗಿತ್ತು.

ಆದರೆ ಜಿಲ್ಲಾಧಿಕಾರಿಗಳು ಐಎಎಸ್ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮೂರು ದಿನಗಳ ಕಾಲ ಪಾಲ್ಗೊಂಡು ಉಳಿದ ಮೂರು ದಿನ ರಜೆಯಲ್ಲಿ ತಮ್ಮ ಊರಿಗೆ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.

ಸೆ.16 ರಂದು ಸೋಮವಾರ ಜಿಲ್ಲಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News