ಮಹಾದಾಯಿ ಜಲ ವಿವಾದ ಇತ್ಯರ್ಥಕ್ಕೆ 3 ರಾಜ್ಯಗಳ ಸಿಎಂಗಳ ಸಭೆ: ಯಡಿಯೂರಪ್ಪ

Update: 2019-09-10 14:36 GMT

ಬೆಂಗಳೂರು, ಸೆ.10: ಮಹಾದಾಯಿ ಜಲ ವಿವಾದ ಇತ್ಯರ್ಥಗೊಳಿಸುವ ಸಂಬಂಧ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ಬೆಳಗಾವಿಗೆ ತೆರಳುವ ಮುನ್ನ ನಗರದ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ನಿವಾಸ ಧವಳಗಿರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಜಲ ವಿವಾದ ಕುರಿತು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಮಾತುಕತೆ ನಡೆಸಲಾಗಿದೆ ಎಂದರು.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ರಿಗೂ ನಮ್ಮ ಭೇಟಿಗೆ ದಿನಾಂಕ ನಿಗದಿಪಡಿಸುವಂತೆ ಕೋರಲಾಗಿದೆ. ಇದೇ ತಿಂಗಳ 16 ಅಥವಾ 17ರಂದು ಗೋವಾಕ್ಕೆ ತೆರಳುವ ಉದ್ದೇಶವಿದೆ. ಮಹಾದಾಯಿ ಜಲ ವಿವಾದ ಆದಷ್ಟು ಶೀಘ್ರದಲ್ಲಿ ಬಗೆಹರಿಯಬೇಕು ಎಂಬುದು ನಮ್ಮ ಉದ್ದೇಶ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News