ನಿವಾಸ ಖಾಲಿ ಮಾಡುವಂತೆ ಮಾಜಿ ಡಿಸಿಎಂ ಪರಮೇಶ್ವರ್‌ಗೆ ನೋಟಿಸ್ ಜಾರಿ

Update: 2019-09-10 15:13 GMT

ಬೆಂಗಳೂರು, ಸೆ.10: ಅವಧಿ ಮುಗಿದ ನಂತರವೂ ಸರಕಾರಿ ನಿವಾಸ ಖಾಲಿ ಮಾಡದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ಗೆ ವಾರದೊಳಗೆ ನಿವಾಸ ಖಾಲಿ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನೋಟಿಸ್ ಜಾರಿಗೊಳಿಸಿದೆ.

ರಾಜ್‌ಮಹಲ್ ವಿಲಾಸ 2ನೆ ಹಂತದ ಸದಾಶಿವನಗರದಲ್ಲಿ ಬಿಡಿಎ ನಿರ್ಮಿಸಿರುವ ವಸತಿ ಗೃಹ(94/ಎ)ವನ್ನು ಬಾಡಿಗೆ ಆಧಾರದ ಮೇಲೆ ಸರಕಾರಕ್ಕೆ ಹಂಚಿಕೆ ಮಾಡಲಾಗಿದೆ. ಸದರಿ ವಸತಿ ಗೃಹವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಕಚೇರಿ ಉಪಯೋಗಕ್ಕಾಗಿ ನೀಡಲಾಗಿದೆ. ಆದುದರಿಂದ ನಿವಾಸವನ್ನು ಕೂಡಲೇ ಖಾಲಿ ಮಾಡಿ ಎಂದು ಪರಮೇಶ್ವರ್‌ಗೆ ಸೂಚನೆ ನೀಡಲಾಗಿದೆ.

ತಮ್ಮ ಅಧಿಕಾರಾವಧಿಯಲ್ಲಿ ಉಪಯೋಗಿಸಿದ ವಿದ್ಯುಚ್ಛಕ್ತಿ ವೆಚ್ಚ ಮತ್ತು ನೀರಿನ ವೆಚ್ಚ ಪಾವತಿಸಿರುವ ಬಿಲ್ಲುಗಳ ವಿವರಗಳೊಂದಿಗೆ ವಸತಿ ಗೃಹವನ್ನು ಒಂದು ವಾರದೊಳಗೆ ಪ್ರಾಧಿಕಾರಕ್ಕೆ ಹಿಂದಿರುಗಿಸುವಂತೆ ಬಿಡಿಎ ಆಯುಕ್ತರು ಸೂಚಿಸಿದ್ದಾರೆ.

ಮೈತ್ರಿ ಸರಕಾರ ಪತನವಾಗಿ ಒಂದೂವರೆ ತಿಂಗಳು ಕಳೆದರೂ ಪರಮೇಶ್ವರ್ ಅವರು ಸದಾಶಿವನಗರದ ಬಿಡಿಎ ವಸತಿ ಗೃಹವನ್ನು ಖಾಲಿ ಮಾಡದ ಕಾರಣ ನೋಟಿಸ್ ನೀಡಲಾಗಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News