ಶಿರಾಲಿ ಅಳ್ವೆಕೋಡಿ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ

Update: 2019-09-10 16:41 GMT

ಭಟ್ಕಳ: ತಾಲೂಕಿನ ಶಿರಾಲಿ ಅಳ್ವೆಕೋಡಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಯಾರೂ ಗಮನ ವಹಿಸುತ್ತಿಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅಲ್ಲಿನ ಗ್ರಾಮಸ್ಥರು ಸೋಮವಾರ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು. 

ಕಳೆದ 3-4 ವರ್ಷಗಳಿಂದ ರಸ್ತೆ ಪರಿಸ್ಥಿತಿ ಹೀಗೆ ಇದೆ. ಶಾಲಾಮಕ್ಕಳು, ಸಾರ್ವಜನಿಕರು ನಿತ್ಯವೂ ನೂರಾರು ಸಂಖ್ಯೆಯಲ್ಲಿ ಇಡೇ ರಸ್ತೆಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಇದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಬೇಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲಾ. ನಾವು ಇದೀಗ ರಸ್ತೆಯಲ್ಲಿ ಗಿಡ ನೆಟ್ಟು ಸಾಂಕೇತಿಕವಾಗಿ ಪ್ರತಿಭಟನೆ ನಸೇಸುತ್ತಿದ್ದೇವೆ. ಸಮಸ್ಯೆಗೆ ಪರಿಹಾರ ಸಿಗದೇ ಇದ್ದರೆ ಉಗ್ರ ಹೋರಾಟವನ್ನು ಸಂಘಟಿಸುವುದಾಗಿ ಎಚ್ಚರಿಸಿದರು. ವಾಸು ಮೊಗೇರ್, ಕೇಶವ್ ಮೊಗೇರ್, ರಾಜು ಮೊಗೇರ್, ಈಶ್ವರ್ ನಾಯ್ಕ, ಸಲಾವುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News