ಸಮಸ್ಯೆ ಬಗ್ಗೆ ಅರಿಯಲು ಸರಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ: ಶ್ರೀರಾಮುಲು

Update: 2019-09-10 17:14 GMT

ಬೆಂಗಳೂರು, ಸೆ.10: ಸರಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು. ಇದಕ್ಕಾಗಿ ಸರಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ನೀಡುವುದು ರಾಜ್ಯ ಸರಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಿ, ವಾಸ್ತವ ಪರಿಸ್ಥಿತಿಗಳನ್ನು ಅರಿತುಕೊಂಡು, ಪರಿಹಾರ ಒದಗಿಸುವ ಪ್ರಯತ್ನ ಮಾಡಲಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಕೆಲವು ಆಸ್ಪತ್ರೆಗಳನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಅಂತಹ ಆಸ್ಪತ್ರೆಗಳಿಗೆ ಭೇಟಿ ನೀಡಿ, ಅಲ್ಲೇ ವಾಸ್ತವ್ಯ ಹೂಡಿ, ಆಸ್ಪತ್ರೆಯ ಸ್ಥಿತಿಗತಿ, ಸಿಬ್ಬಂದಿ ಕೊರತೆ, ರೋಗಿಗಳ ಸಮಸ್ಯೆ ಆಲಿಸಿ, ರಾಜ್ಯದಲ್ಲಿ ಎಲ್ಲ ಸರಕಾರಿ ಪ್ರಾಥಮಿಕ ಕೇಂದ್ರ ಹಾಗೂ ಆಸ್ಪತ್ರೆಗಳನ್ನು ಮಾದರಿ ಆಸ್ಪತ್ರೆಗಳನ್ನಾಗಿ ಮಾಡಲು ಶ್ರಮಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News