ಡಿಕೆಶಿ ಬಂಧನ ಖಂಡಿಸಿ ಮೈಸೂರಿನಲ್ಲಿ ವಿನೂತನ ಪ್ರತಿಭಟನೆ

Update: 2019-09-10 17:51 GMT

ಮೈಸೂರು,ಸೆ.10: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಗ್ರಹಾರ ವೃತ್ತದಲ್ಲಿ ಕಳೆದ ನಾಲ್ಕು ದಿನಗಳಿಂದಲೂ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಂಗಳವಾರ ಪ್ರಧಾನಿ ನರೆಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮುಖವಾಡ ಧರಿಸಿದ ವ್ಯಕ್ತಿಗಳ ಕುತ್ತಿಗೆಗೆ ಹಗ್ಗ ಹಾಕಿ ಯಮ ಕಿಂಕರರು ಎಳೆದುಕೊಂಡು ಹೋಗುತ್ತಿರುವ ರೀತಿ ವ್ಯಂಗ್ಯವಾಡಿ ಅಣಕು ಪ್ರದರ್ಶನ ಮಾಡಿದರು.

ಪ್ರತಿಭಟನೆಯನ್ನು ಮೋದಿ ಮತ್ತು ಅಮಿತ್ ಶಾ ಕದ್ದು ನೋಡುತ್ತಿರುವಂತೆ ಅಣಕು ಪ್ರದರ್ಶನ ನಡೆಸಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕಳ್ಳರು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಶ್ರೀನಾಥ್ ಬಾಬು, ಮೈಸೂರು ಬಸವಣ್ಣ, ಎನ್.ಭಾಸ್ಕರ್, ಹೆಡತಲೆ ಮಂಜುನಾಥ್, ಮಹೇಶ್, ಈಶ್ವರ ಚಿಕ್ಕಡಿ, ಪ್ರಶಾಂತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News