ಮಂಗಳೂರು: ಅಕ್ರಮ ಮರಳು ಸಾಗಾಟ ಆರೋಪ; ಸೊತ್ತು ಸಹಿತ ಲಾರಿಗಳು ವಶಕ್ಕೆ

Update: 2019-09-11 05:09 GMT

ಮಂಗಳೂರು: ಅಕ್ರಮ ಮರಳು ಸಾಗಾಟದ ಆರೋಪದಲ್ಲಿ ಮರಳು ಸಹಿತ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೂಡುಬಿದಿರೆಯಲ್ಲಿ ಮಂಗಳವಾರ ನಡೆದಿದೆ. 

ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕರು  ಸಿಬ್ಬಂದಿಗಳೊಂದಿಗೆ ಗಸ್ತು ಸಂಚರಿಸುತ್ತಾ ಮೂಡಬಿದ್ರೆಯ ನಿಡ್ಡೋಡಿ, ಪುತ್ತಿಗೆ, ಕಡಲಕೆರೆ ಕಡೆಗಳಲ್ಲಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಲಾರಿಯಲ್ಲಿ ಮರಳು ತುಂಬಿರುವುದು ಕಂಡು ಬಂದಿದ್ದು, ಯಾವುದೇ ಪರವಾನಿಗೆ  ಇರಲಿಲ್ಲ ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧಿಸಿ ನಾಲ್ಕು ಲಾರಿಗಳನ್ನು ವಶಕ್ಕೆ ಪಡೆದು ಲಾರಿಗಳನ್ನು ಹಾಗೂ ಅದರಲ್ಲಿ ತುಂಬಿರುವ ಮರಳನ್ನು ಮುಂದಿನ ಕ್ರಮದ ಬಗ್ಗೆ  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News