ಪಾಂಡೇಶ್ವರ: ನೇಣು ಬಿಗಿದು ಯುವಕ‌ ಆತ್ಮಹತ್ಯೆ

Update: 2019-09-11 05:40 GMT

ಮಂಗಳೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಪಾಂಡೇಶ್ವರದಲ್ಲಿ  ನಡೆದಿದ್ದು, ವಿಪರೀತ ವಾಸನೆಯಿಂದ ಬುಧವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಮೂಡುಬಿದಿರೆ ನಿವಾಸಿ ಅರುಣ್ ರಾಜ್ (31) ಮೃತರು ಎಂದು ಗುರುತಿಸಲಾಗಿದೆ.

ಅವರು ಪಾಂಡೇಶ್ವರದ ನ್ಯೂ ರೋಡ್ ರಸ್ತೆಯ ತನ್ನ ಅಜ್ಜಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ.

ಈ ಬಗ್ಗೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News