ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2019-09-12 15:48 GMT

ಶಿರ್ವ, ಸೆ.12: ಯುವಕನೊಬ್ಬ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಪು ಗ್ರಾಮದ ಪಣಿಯೂರು ಖಾನ ಶ್ರೀಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ಅಂಗಣದಲ್ಲಿ ನಡೆದಿದೆ.

ಮೃತರನ್ನು ಪಣಿಯೂರು ಹತ್ವಾರಿ ಮನೆಯ ರವಿರಾಜ್ ರಾವ್ (36) ಎಂದು ಗುರುತಿಸಲಾಗಿದೆ. ಅವರು ಬುಧವಾರ ಸಂಜೆ 4ರಿಂದ 6:30ರ ನಡುವಿನ ಅವಧಿಯಲ್ಲಿ ದೇವಸ್ಥಾನದ ಪೂರ್ವದಿಕ್ಕಿನ ಅಂಗಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News