ಸಾಲಬಾಧೆ: ರೈತ ಆತ್ಮಹತ್ಯೆ

Update: 2019-09-12 17:03 GMT

ಮಂಡ್ಯ, ಸೆ.12: ಮದ್ದೂರು ತಾಲೂಕಿನ ಚಿಕ್ಕೊನಹಳ್ಳಿ ಗ್ರಾಮದಲ್ಲಿ ರೈತ ಸಾಲಬಾಧೆಯಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಣ್ಣ ಅವರ ಮಗ ಸಿದ್ದರಾಜು(40) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ 3 ಎಕರೆ ಜಮೀನಿದ್ದು, ಭತ್ತ, ರಾಗಿ, ಕಬ್ಬಿನ ಬೆಳೆದಿದ್ದರು. ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳಿಂದ 3 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ.

ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News