ಪ್ರತಿಭಟನೆಗೆ ಬೆಂಬಲಿಸಿದವರಿಗೆ ಸಂಸದ ಡಿ.ಕೆ.ಸುರೇಶ್ ಧನ್ಯವಾದ

Update: 2019-09-12 17:22 GMT

ಬೆಂಗಳೂರು, ಸೆ.12: ನನ್ನ ಅಣ್ಣನಾದ ಡಿ.ಕೆ.ಶಿವಕುಮಾರ್‌ರನ್ನು ಕೇಂದ್ರ ಸರಕಾರದ ಪಿತೂರಿಯಿಂದ ಜಾರಿ ನಿರ್ದೇಶನಾಲಯ ವಿಚಾರಣೆ ಸಂಬಂಧ ಬಂಧನ ಖಂಡಿಸಿ ನಡೆದ ಪ್ರತಿಭಟನೆಗೆ ಬೆಂಬಲಿಸಿದ ಶ್ರೀ ನಂಜಾವದೂತ ಮಹಾಸ್ವಾಮಿ, ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದ ನನ್ನೆಲ್ಲಾ ಒಕ್ಕಲಿಗ ಬಾಂಧವರು, ವಿವಿಧ ಸಂಘ ಸಂಸ್ಥೆಗಳು, ಒಕ್ಕೂಟಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ನನ್ನ ಅಣ್ಣನ ಮತ್ತು ನನ್ನ ಕುಟುಂಬದ ಪರವಾಗಿ ಅನಂತ ಅನಂತ ಧನ್ಯವಾದಗಳು. 

ಪ್ರತಿಭಟನೆಗೆ ಸಹಕರಿಸಿದ ಎಲ್ಲರಿಗೂ ವಿಶೇಷವಾಗಿ ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮಗಳಿಗೆ ಮನಃಪೂರ್ವಕ ಧನ್ಯವಾದಗಳು ಎಂದು ಸಂಸದ ಡಿ.ಕೆ.ಸುರೇಶ್ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News