ವಿಜಯಪುರ: ನ್ಯಾಯವಾದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ

Update: 2019-09-13 05:35 GMT

ವಿಜಯಪುರ, ಸೆ.13: ತಂಡವೊಂದು ನ್ಯಾಯವಾದಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ಇಂಡಿ ಪಟ್ಟಣದಲ್ಲಿ ನಡೆದಿದೆ.

ನ್ಯಾಯವಾದಿ ಸಂಗಮೇಶ ಚಾಂದಕವಟೆ ಹಲ್ಲೆಗೊಳಗಾದವರು. ಆರೋಪಿಗಳಾದ ಸಾದಿಕ್ ಹಾಗೂ ಮೂಸಾ ಎಂಬವರು ಸೇರಿದಂತೆ ಒಟ್ಟು ನಾಲ್ವರ ತಂಡ ಈ ಕೃತ್ಯ ಎಸಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

 ಸಂಗಮೇಶ ಅವರು ದುಷ್ಕರ್ಮಿಗಳ ದಾಳಿಯಿಂದ ರಕ್ಷಣೆಗಾಗಿ ಕೈ ಅಡ್ಡ ಹಿಡಿದ ಪರಿಣಾಮ ಅವರ ಕೈ ಬೆರಳುಗಳಿಗೆ ತೀವ್ರತರದ ಗಾಯಗಳಾಗಿವೆ. ಅವರನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಹಳೆಯ ವೈಷಮ್ಯದಿಂದ ಈ ಹಲ್ಲೆ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ನಡುವೆ ಹಲ್ಲೆ ಆರೋಪಿಗಳು ಪರಾರಿಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಇಂಡಿ ಪಟ್ಟಣ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News