ಸಚಿವ ಮಾಧುಸ್ವಾಮಿ ವಿರುದ್ಧ ಕಾಂಗ್ರೆಸ್ ಆಕ್ರೋಶ

Update: 2019-09-13 14:27 GMT
ಸಚಿವ ಮಾಧುಸ್ವಾಮಿ

ಬೆಂಗಳೂರು, ಸೆ.13: ಕಾನೂನು ಸಚಿವರಾಗಿ ಜವಾಬ್ದಾರಿಯಿಂದ ಮಾತನಾಡಬೇಕಿದ್ದ ಜೆ.ಸಿ.ಮಾಧುಸ್ವಾಮಿಯವರು ಸಮಾಜದ ಕೆಟ್ಟ ಪಿಡುಗಾಗಿರುವ ಅಸ್ಪಶ್ಯತೆ ಬಗ್ಗೆ ಮೃದು ಧೋರಣೆಯಿಂದ ಮಾತನಾಡಿರುವುದು ಸರಿಯಲ್ಲ. ಕಾನೂನು ಸಚಿವರೇ ಸಂವಿಧಾನದ ಆಶಯಗಳನ್ನು ಮರೆತು ಮಾತನಾಡುತ್ತಿರುವುದು ವಿಪರ್ಯಾಸವೇ ಸರಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಿಸಿದೆ. 

ಮಾಜಿ ಸಚಿವ ಜಿ.ಟಿ.ದೇವೇಗೌಡ ಬಿಜೆಪಿಗೆ ಅಸ್ಪಶ್ಯರಲ್ಲ. ಅವರು ಬಿಜೆಪಿಗೆ ಬಂದರೆ ಒಳ್ಳೆಯದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಇತ್ತೀಚೆಗೆ ಹೇಳಿಕೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅವರ ವಿರುದ್ಧ ಟ್ವೀಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News