ಉ.ಪ್ರದೇಶದ ಕಾಲೇಜಿನಲ್ಲಿ ಗಾಂಧಿ ಪ್ರತಿಮೆ ಭಗ್ನ

Update: 2019-09-13 17:28 GMT

ಜಾಲೌನ್,ಸೆ.13: ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಕಾಲೇಜೊಂದರಲ್ಲಿಯ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಭಗ್ನಗೊಳಿಸಿರುವುದು ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಓರಾಯ್‌ನ ಗಾಂಧಿ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು,ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಮೆಯ ದುರಸ್ತಿ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಎಸ್‌ಪಿ ಸತೀಶ ಕುಮಾರ ತಿಳಿಸಿದರು.

 ಘಟನೆಯ ವಿರುದ್ಧ ಸ್ಥಳೀಯ ನಿವಾಸಿಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಯನ್ನು ನಡೆಸಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು ಎಂದು ತಿಳಿಸಿರುವ ಜಿಲ್ಲಾ ಕಾಂಗ್ರೆಸ್,ಹೊಸ ಪ್ರತಿಮೆಯ ಸ್ಥಾಪನೆಗೆ ಆಗ್ರಹಿಸಿದೆ.

ಹಿಂದು ಧರ್ಮದಂತೆ ಭಗ್ನಗೊಂಡಿರುವ ಪ್ರತಿಮೆಯನ್ನು ದುರಸ್ತಿ ಮಾಡುವುದಿಲ್ಲ,ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ ಎಂದಿರುವ ಅದು,ಹೊಸ ಪ್ರತಿಮೆ ಸ್ಥಾಪನೆಯಾಗುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News