ನಿವೃತ್ತ ಐಎಎಸ್ ಅಧಿಕಾರಿ, ಮೈಕ್ರೊಸಾಫ್ಟ್ ಸಿಇಒ ಸತ್ಯ ನಡೆಲ್ಲಾ ತಂದೆ ಯುಗಂಧರ ನಿಧನ

Update: 2019-09-14 06:25 GMT

ಹೈದರಾಬಾದ್,ಸೆ.13: ಮೈಕ್ರೋಸಾಫ್ಟ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತ್ಯ ನಡೆಲ್ಲಾ ಅವರ ತಂದೆ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬುಕ್ಕಾಪುರಂ ನಾದೆಲ್ಲಾ ಯುಗಂಧರ (80) ಅವರು ಶುಕ್ರವಾರ ಇಲ್ಲಿಯ ಬಂಜಾರಾ ಹಿಲ್ಸ್‌ನಲ್ಲಿರುವ ತನ್ನ ನಿವಾಸದಲ್ಲಿ ನಿಧನರಾದರು. ಅವರು ಕೆಲವು ಸಮಯದಿಂದ ಅಸ್ವಸ್ಥರಾಗಿದ್ದರು.

ಯುಗಂಧರ ಅವರು ಪ್ರಧಾನಿ ಕಚೇರಿಯಲ್ಲಿ ಮತ್ತು ಯೋಜನಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು.

1962ರ ಐಎಎಸ್ ತಂಡದ ಅಧಿಕಾರಿಯಾಗಿದ್ದ ಅವರು,ಅವಿಭಜಿತ ಆಂಧ್ರ ಪ್ರದೇಶ ಮತ್ತು ಕೇಂದ್ರದಲ್ಲಿ ಹಲವಾರು ಮುಖ್ಯ ಹುದ್ದೆಗಳನ್ನು ನಿರ್ವಹಿಸಿದ್ದರು. ವೃತ್ತಿಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡಿದ್ದ ಅವರು ಬಡವರು ಮತ್ತು ಶೋಷಿತ ವರ್ಗಗಳಿಗಾಗಿ ಹಲವಾರು ಯೊಜನೆಗಳ ಜಾರಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಪಿ.ವಿ.ನರಸಿಂಹರಾವ್ ಅವರು ಪ್ರಧಾನಿಯಾಗಿದ್ದಾಗ ಯುಗಂಧರ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಅತ್ಯುನ್ನತ ಅಧಿಕಾರಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News