ಬಂಟ್ವಾಳ: ಅಕ್ರಮ ಮರಳು ಸಾಗಾಟ ಆರೋಪ; 5 ಲಾರಿಗಳು ವಶಕ್ಕೆ

Update: 2019-09-14 07:42 GMT

ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಗಳ ವಿರುದ್ಧ ಶುಕ್ರವಾರ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ನೇತೃತ್ವದ ತಂಡ ದಾಳಿ ನಡೆಸಿ 5 ಲಾರಿಗಳನ್ನು ವಶಪಡಿಸಿ ಪೊಲೀಸರಿಗೆ ಹಸ್ತಾಂತರಿಸಿದೆ.

ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳುಗಳನ್ನು ರಾತ್ರಿ ವೇಳೆ ಹೊರ ಜಿಲ್ಲೆಗಳಿಗೆ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲು ಲಾರಿಗಳಲ್ಲಿ ತುಂಬಿಸಿ ಪರವಾನಿಗೆ ರಹಿತ ಸಾಗಿಸುತ್ತಿದ್ದ ಲಾರಿಗಳನ್ನು ತಡೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಣೆಮಂಗಳೂರು ನರಹರಿ ಬಳಿಯಲ್ಲಿ ಎರಡು ಲಾರಿ, ಮಾರ್ನಬೈಲುನಲ್ಲಿ ಒಂದು ಲಾರಿ, ಚೇಲೂರಿನಲ್ಲಿ ಒಂದು ಹಾಗೂ ವಿಟ್ಲದ ಪಡಿಬಾಗಿಲು ಎಂಬಲ್ಲಿ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News