ಪುತ್ತೂರು: ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು

Update: 2019-09-14 16:57 GMT

ಪುತ್ತೂರು: ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಎಲೆಕ್ಟ್ರಿಷಿಯನ್ ವೃತ್ತಿಯ ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದರ್ಖಾಸ್ ಎಂಬಲ್ಲಿ ನಡೆದಿದೆ.

ಪುತ್ತೂರಿನ ತಾಲೂಕಿನ ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ಗಣೇಶ್ ಗೌಡ ಕೆ.ಎಸ್. (36) ಮೃತರು ಎಂದು ಗುರುತಿಸಲಾಗಿದೆ.

ಪುತ್ತೂರು ಬೊಳುವಾರಿನ ಎಲೆಕ್ಟ್ರಿಷಿಯನ್ ಅಂಗಡಿಯ ಮಾಲಕ ಗಣೇಶ್ ಗೌಡ  ಅವರು ಶುಕ್ರವಾರ ರಾತ್ರಿ ವೇಳೆ ತಮ್ಮ ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರು ತಾಯಿ, ಪತ್ನಿ, ಪುತ್ರ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News