ಉಡುಪಿ: ಸೆ.16 ರಂದು ಸಾಲುಮರದ ತಿಮ್ಮಕ್ಕರೊಂದಿಗೆ ವಿಶಿಷ್ಟ ಕಾರ್ಯಕ್ರಮ
Update: 2019-09-14 15:05 GMT
ಉಡುಪಿ, ಸೆ.14: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ವತಿಯಿಂದ ಶತಮಾನ ಕಂಡ ಸಂಸ್ಥೆಯೊಂದಿಗೆ ಸಾಲು ಮರದ ತಿಮ್ಮಕ್ಕ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಸೆ.16 ರಂದು ಅಪರಾಹ್ನ 12 ಗಂಟೆಗೆ ಸಂಘದ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್, ಪೌರಾಯುಕ್ತ ಆನಂದ್ ಸಿ. ಕಲ್ಲೋಲಿಕರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರ ಪ್ರತಿಮಾ ಭಾಗವಹಿಸಲಿರುವರು ಎಂದು ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.