ನಿಟ್ಟೂರು ಪ್ರೌಢ ಶಾಲೆ: ಸೆ.15ರಂದು ಶಿಕ್ಷಕರಿಗೆ ಅಭಿನಂದನೆ

Update: 2019-09-14 16:38 GMT

ಉಡುಪಿ, ಸೆ.14: 50ರ ಹೊಸ್ತಿಲಲ್ಲಿರುವ ನಿಟ್ಟೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಜನೆಗೈದು ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸುಮಾರು 50 ಹಳೆವಿದ್ಯಾರ್ಥಿ ಶಿಕ್ಷಕರನ್ನು ಶಾಲಾ ರಜತ ಸಭಾಭವನದಲ್ಲಿ ಶಾಲೆ ಹಳೆ ವಿದ್ಯಾರ್ಥಿ ಸಂಘವು ಅಭಿನಂದಿಸುವ ಕಾರ್ಯಕ್ರಮವನ್ನು ಸೆ.15ರ  ಪೂರ್ವಾಹ್ನ 9:30ಕ್ಕೆ ಆಯೋಜಿಸಿದೆ.

ನಿವೃತ್ತ ಉಪನ್ಯಾಸಕ ಡಾ. ಬಿ.ಎಂ. ಸೋಮಯಾಜಿ ಅಧ್ಯಕ್ಷತೆಯಲ್ಲಿ ಜರಗುವ ಸಮಾರಂಭದಲ್ಲಿ ಶಿಕ್ಷಕರನ್ನು ಶಾಲಾ ಸಂಚಾಲಕ ಹಾಗೂ ಶಾಸಕರಾದ ಕೆ. ರಘುಪತಿ ಭಟ್ ಸನ್ಮಾನಿಸಲಿರುವರು. ಶಾಲಾ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಉಪಸ್ಥಿತಿ ಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಮಂಜುನಾಥ ಇವರನ್ನು ಗೌರಸಲಾಗುವುದು ಎಂದು ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರದೀಪ್ ಜೋಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News