ಮಕ್ಕಳಿಬ್ಬರಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ಮಹಿಳೆ

Update: 2019-09-14 17:28 GMT

ಚಾಮರಾಜನಗರ, ಸೆ.14: ಗಂಡನ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ಮಕ್ಕಳಿಬ್ಬರಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ಘಟನೆ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ನಡೆದಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹೆತ್ತ ಮಕ್ಕಳಿಗೆ ವಿಷ ಹಾಕಿ ಬಳಿಕ ತಾನೂ ವಿಷ ಸೇವಿಸಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಗೀತಾ(27) ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತದ್ದರೆ, ಮಕ್ಕಳಾದ ರವಿತೇಜ(4) ಮತ್ತು ಶ್ರೀರಂಗ(2) ರವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಡನ ಮಾನಸಿಕ ಹಿಂಸೆಯೇ ಕಾರಣ ಎಂದು ಹೇಳಿಕೆ ನೀಡಿದ ಗೃಹಿಣಿ ಗೀತಾ, ತನ್ನನ್ನು ಹಾಗೂ ತನ್ನ ಮಕ್ಕಳನ್ನು ಯಾರೂ ಪೋಷಣೆ ಮಾಡುತ್ತಿಲ್ಲ. ಹಾಗಾಗಿ ಆತ್ಮಹತ್ಯೆಗೆ ಸಿದ್ದರಾದೆವು ಎಂದು ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಟೌನ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ‌ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News