ಚಿತ್ರಪ್ರದರ್ಶನಕ್ಕೆ ತಡೆ, ನಿಂದನೆ ಪ್ರಕರಣ: ಎಂಟು ಮಂದಿ ವಿಚಾರಣೆ

Update: 2019-09-14 17:31 GMT

ಮಂಗಳೂರು, ಸೆ.14: ಗಿರಿಗಿಟ್ ತುಳು ಚಿತ್ರಪ್ರದರ್ಶನಕ್ಕೆ ತಡೆಯಾಜ್ಞೆ ತಂದ ವಕೀಲರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿಯಾಗಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂದರು ಪೊಲೀಸರು ಎಂಟು ಮಂದಿಯನ್ನು ವಿಚಾರಣೆ ನಡೆಸಿದ್ದಾರೆ.

ಗಿರಿಗಿಟ್ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದಕ್ಕೆ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂದರ್ಭ ಅವಹೇಳನ ಮಾಡಿದ ಬಗ್ಗೆ ದಾಖಲೆಗಳನ್ನು ಪೊಲೀಸರಿಗೆ ಸಲ್ಲಿಸಲಾಗಿತ್ತು. ಅವಹೇಳನ ಮಾಡಿದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಪೊಲೀಸ್ ಕಮಿಷನರ್‌ಗೆ ವಕೀಲರ ಸಂಘ ನಿಯೋಗ ಮನವಿ ಮಾಡಿತ್ತು. ಬಂದರು ಪೊಲೀಸರು ಪ್ರಕರಣ ದಾಖಲಿಸಿ ಅನುಮಾನಾಸ್ಪದ ಎಂಟು ಮಂದಿಯನ್ನು ವಿಚಾರಣೆ ನಡೆಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

***

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News