ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Update: 2019-09-14 17:34 GMT

ಮಂಗಳೂರು, ಸೆ.14: ನಗರದ ಬೆಂದೂರ್‌ನ ಖಾಸಗಿ ಆಸ್ಪತ್ರೆ ಸಮೀಪದ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯಲ್ಲಿ ವಾಸ್ತವ್ಯ ಇರುವ ನಿತ್ಯಾನಂದ ಶೆಟ್ಟಿ ಅವರ ಮನೆಯಿಂದ 35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 65,000 ರೂ. ನಗದು ಕಳವಾಗಿದೆ.

 ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ನಿತ್ಯಾನಂದ ಶೆಟ್ಟಿ ಮತ್ತು ಅವರ ಕುಟುಂಬದ ಸದಸ್ಯರು ಸೆ.8ರಂದು ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದು, ಸೆ.13ರಂದು ವಾಪಸ್ ಬಂದಾಗ ಮನೆಯಲ್ಲಿ ಕಳವಾಗಿರುವುದು ಬೆಳಕಿಗೆ ಬಂದಿದೆ.

ಮನೆಯ ಶೌಚಾಲಯದ ವೆಂಟಿಲೇಟರ್‌ನ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದು, ಅಲ್ಲಿದ್ದ ಲಾಕರ್‌ನ ಬೀಗ ಮುರಿದತು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ನಿತ್ಯಾನಂದ ಶೆಟ್ಟಿ ಅವರ ಪತ್ನಿ ಅನಿತಾ ಶೆಟ್ಟಿ ಅವರು ನೀಡಿದ ದೂರಿನಂತೆ ಕದ್ರಿ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News