ಮೈಸೂರು ದಸರಾ: ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ

Update: 2019-09-14 17:58 GMT

ಮೈಸೂರು,ಸೆ.14: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಮತ್ತು ದಸರಾ ಕ್ರೀಡಾಕೂಟದ ಉದ್ಘಾಟನೆಗೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.

ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದ ಪರವಾಗಿ ಶನಿವಾರ ಪಿ.ವಿ.ಸಿಂಧೂ ಅವರ ಹೈದರಬಾದ್ ನಿವಾಸದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅಹ್ವಾನ ಪತ್ರಿಕೆ ಮತ್ತು ಹೂಗುಚ್ಚ ನೀಡಿ ಮೈಸೂರಿಗೆ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.

ದಸರಾ ಮೋಹೊತ್ಸವದ ಪ್ರಮುಖ ಆಕರ್ಷಣೆ ಯುವ ದಸರಾ ಅಕ್ಟೋಬರ್ 1 ರಂದು ಪ್ರಾರಂಭಗೊಳ್ಳಲಿದ್ದು, ಇದರ ಉದ್ಘಾಟನೆಗೆ ಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ನಾಲ್ಕು ದಿನಗಳ ಹಿಂದೆ ಪತ್ರ ಬರೆದು ಕೋರಿಕೊಂಡಿದ್ದರು. ಇಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಖುದ್ದು ಭೇಟಿ ನೀಡಿ ಆಹ್ವಾನಿಸಿದರು.

ಇದೇ ವೇಳೆ ಪಿ.ವಿ.ಸಿಂಧು ಅವರ ತಂದೆ, ತಾಯಿ ಮತ್ತು ಅವರ ಸಂಬಂಧಿಕರು ಹಾಜರಿದ್ದು, ಯುವ ದಸರಾ ಮತ್ತು ಕ್ರೀಡಾಕೂಟದ ಉದ್ಘಾಟನೆಗೆ ಅವಕಾಶ ಲಭಿಸಿರುವುದಕ್ಕೆ ಸಂಸತಪಟ್ಟರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News