ಸೆ.17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ಬಿಎಸ್‌ವೈ, ರಾಯಚೂರಿನಲ್ಲಿ ಕಾರಜೋಳ ಧ್ವಜಾರೋಹಣ

Update: 2019-09-15 17:02 GMT

ಬೆಂಗಳೂರು, ಸೆ. 15: ‘ಕಲ್ಯಾಣ ಕರ್ನಾಟಕ ಉತ್ಸವ’ ಸೆ.17ರಂದು ಹೈದರಾಬಾದ್ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ನಡೆಯಲಿದ್ದು, ಕಲಬುರಗಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಯಾದಗಿರಿ ಜಿಲ್ಲೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶಿಷ್ಟಾಚಾರ ವಿಭಾಗದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ-ರಾಯಚೂರು, ಡಿಸಿಎಂ ಲಕ್ಷ್ಮಣ ಸವದಿ-ಬಳ್ಳಾರಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್-ಕೊಪ್ಪಳ ಹಾಗೂ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್-ಬೀದರ್ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News