ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2019-09-16 12:47 GMT

ಬೆಂಗಳೂರು, ಸೆ. 16: ಮಹಾತ್ಮ ಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ 5 ಲಕ್ಷ ರೂ. ನಗದು ಒಳಗೊಂಡ ರಾಜ್ಯ ಸರಕಾರದ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರು ಮತ್ತು ಆಸಕ್ತರಿಂದ ಅರ್ಜಿ ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. 

ನಿವೃತ್ತ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆಯ್ಕೆ ಸಮಿತಿ ಮೊದಲ ಸಭೆಯಲ್ಲಿ ಅಸ್ಪಶ್ಯತಾ ನಿವಾರಣೆ, ಅಹಿಂಸೆ, ಮಕ್ಕಳ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಪಾನ ನಿರೋಧ, ಖಾದಿ ಹಾಗೂ ಸ್ವದೇಶಿ ವಸ್ತುಗಳ ಬಳಕೆ ಮತ್ತು ಪ್ರೋತ್ಸಾಹ ಎಸ್ಸಿ-ಎಸ್ಟಿ ವರ್ಗದ ಜನರ ಶ್ರೇಯೋಭಿವೃದ್ಧಿ ಕಾರ್ಯ ಚಟುವಟಿಕೆಗಳಲ್ಲಿ ಸ್ವ-ಪ್ರೇರಣೆಯಿಂದ ತೊಡಗಿರುವ 60ವರ್ಷ ವಯೋಮಾನ ಪೂರ್ಣಗೊಳಿಸಿರುವ ವ್ಯಕ್ತಿಗಳನ್ನು ಹಾಗೂ ಸೇವೆಯಲ್ಲಿ 25 ವರ್ಷ ಪೂರ್ಣಗೊಳಿಸಿರುವ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲು ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಇಂತಹ ಕಾರ್ಯ ಚಟುವಟಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆಗಳು ಅರ್ಜಿಗಳನ್ನು ಹಾಗೂ ಇಂತಹ ವ್ಯಕ್ತಿ ಅಥವಾ ಸಂಸ್ಥೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವವರು ನಾಮ ನಿರ್ದೇಶನಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಕಚೇರಿಯ ಇ-ಮೇಲ್- pressandnews bangalore@gmail.com ನ್ನು ವಿಳಾಸಕ್ಕೆ ಸೆ.18ರ ರಾತ್ರಿ 9ಗಂಟೆಯೊಳಗೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News