ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ
Update: 2019-09-16 16:01 GMT
ಉಡುಪಿ, ಸೆ.16: ನಿಟ್ಟೂರು ಹನುಮಂತ ನಗರ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.15ರಂದು ರಾತ್ರಿ 9.45ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂಗೊಂಡಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಕೊಡವೂರು ಲಕ್ಷ್ಮೀ ನಗರದ ಗೌರೀಶ್ ಎಂಬವರ ಕಾರಿಗೆ ಹಿಂದಿನಿಂದ ಬರುತ್ತಿದ್ದ ರತ್ನಾಕರ ಭಟ್ ಎಂಬವರ ಕಾರು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗೌರೀಶ್ ಅವರ ಕಾರು ಎದುರಿನಿಂದ ಹೋಗುತ್ತಿದ್ದ ನಾಗರಾಜ ದ್ವಿಚಕ್ರ ವಾಹನ ಮತ್ತು ಬಸ್ಸಿಗೆ ಢಿಕ್ಕಿ ಹೊಡೆಯಿತು. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ನಾಗರಾಜ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ನಾಲ್ಕೂ ವಾಹನಗಳು ಜಖಂಗೊಂಡಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.