ರೈಲು ಢಿಕ್ಕಿ ಹೊಡೆದು ಮೃತ್ಯು

Update: 2019-09-16 16:15 GMT

 ಕುಂದಾಪುರ, ಸೆ.16: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.16ರಂದು ಬೆಳಗ್ಗೆ ಬಸ್ರೂರು ರೈಲ್ವೆ ಸೇತುವೆ ಸಮೀಪ ನಡೆದಿದೆ.

ಮೃತರನ್ನು ಸಂತೋಷ ಶೆಟ್ಟಿ(52) ಎಂದು ಗುರುತಿಸಲಾಗಿದೆ.

ರೈಲ್ವೆ ಹಳಿ ಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇವರಿಗೆ ರೈಲೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News