ಕೆರೆಗೆ ಬಿದ್ದು ಮೃತ್ಯು

Update: 2019-09-16 16:16 GMT

ಕೋಟ, ಸೆ.16: ವಿಪರೀತ ಮಧ್ಯಪಾನ ಮಾಡುವ ಚಟ ಹೊಂದಿದ್ದ ಕೋಟತಟ್ಟು ಗ್ರಾಮದ ಪಡುಕೆರೆ ನಿವಾಸಿ ರಾಜು ಪೂಜಾರಿ (60) ಎಂಬವರು ಸೆ.15ರಂದು ಮಧ್ಯಾಹ್ನದಿಂದ ಸೆ.16ರ ಬೆಳಗ್ಗಿನ ಮಧ್ಯಾವಧಿಯಲ್ಲಿ ಪೇಟೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೋಟತಟ್ಟು ಗ್ರಾಮದ ಪಡುಕೆರೆ ಸಮುದ್ರ ಬಳಿಯ ಶಿರ್ಸಿ ಮಾರಿಕಾಂಬಾ ದೇವಸ್ಥಾನದ ತೋಟದ ಕೆರೆಗೆ ಅಕಸ್ಮಿವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News