ಕೊಲೆಯತ್ನ, ಹಲ್ಲೆ, ಡರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2019-09-16 16:45 GMT

ಉಳ್ಳಾಲ: ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ತೊಕ್ಕೊಟ್ಟು ಒಳಪೇಟೆಯ ಕವಿತ್ ಪೂಜಾರಿ(29) ಎಂಬಾತನನ್ನು ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಮತ್ತು ಡರೋಡೆ ಪ್ರಕರಣ ಸೇರಿದಂತೆ ಸುಮಾರು 6 ಪ್ರಕರಣಗಳು ದಾಖಲಾಗಿವೆ.

ಉಳ್ಳಾಲ ಪೊಲೀಸ್ ಠಾಣೆಯ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ.  ಆರೋಪಿಯ ಪತ್ತೆಯ ಕುರಿತು ನ್ಯಾಯಾಲಯ ಈತನ ಮೇಲೆ ವಾರಂಟ್ ಹೊರಡಿಸಿತ್ತು . ಅದರಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ತೊಕ್ಕೊಟ್ಟುವಿನಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ  ಮುಂದಿನ ಕ್ರಮದ ಬಗ್ಗೆ ಈತನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News