ವಿದ್ಯಾರ್ಥಿಗಳ ಸಾಧನೆಗೆ ಕ್ರೀಡೆ ಅಗತ್ಯ: ಶಾಸಕ ವೇದವ್ಯಾಸ ಕಾಮತ್

Update: 2019-09-16 16:48 GMT

ಮಂಗಳೂರು, ಸೆ.16: ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಕ್ರೀಡಾಕೂಟ ಸಹಕಾರಿ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಉತ್ತರವಲಯ ಹಾಗೂ ಬ್ರೈಟ್ ಮಾಡೆಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುದ್ರೋಳಿ ಸಹಯೋಗದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಮಂಗಳೂರು ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕ್ರೀಡಾಕೂಟದ ಸೋಲು ಗೆಲವು, ಚಟುವ ಟಿಕೆಗಳು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡಲು ಸ್ಫೂರ್ತಿಯಾಗಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಡಾ.ಮುಹಮ್ಮದ್ ಮುಬೀನ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಬ್ರೈಟ್ ಮಾಡೆಲ್ ಸ್ಕೂಲ್ ನ ಅಧ್ಯಕ್ಷ ಅಬ್ದುಲ್ ಲತೀಫ್ ಕೆ.ಕೆ., ಲಕ್ಷ್ಮಣ್ ಕುಂದರ್, ಶೌಕತ್ ಶೌರಿ, ವಿಶ್ವಾಸ್ ಕುಮಾರ್ ದಾಸ್, ಮುಹಮ್ಮದ್ ಶರೀಫ್ ಸಾದ್, ಹನೀಫ್ ಮಾಸ್ಟರ್, ಎಸ್.ಎ. ಖಲೀಲ್, ಆಶಾ ನಾಯಕ್, ಮುಖ್ಯ ಶಿಕ್ಷಕಿ ಕೌಸ್ತುಭ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News