​ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ವಿಶೇಷ ಚೇತನ ಮಕ್ಕಳಿಗೆ ಶಾಸಕ ವೇದವ್ಯಾಸ ಕಾಮತ್ ನೆರವು

Update: 2019-09-17 11:49 GMT

ಮಂಗಳೂರು, ಸೆ.17: ದ.ಕ.ಜಿಲ್ಲಾ ಕಿವುಡರ ಸಂಘದ ‘ವಿಶೇಷ ಚೇತನ’ ಮಕ್ಕಳಿಗೆ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸೆ.13-15ರವರೆಗೆ ಮಂಡ್ಯದಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ (ಕಿವುಡ ಮತ್ತು ಮೂಗರು) ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕ್ರೀಡಾಕೂಟದಲ್ಲಿ ದ.ಕ.ಜಿಲ್ಲಾ ಕಿವುಡರ ಸಂಘದ ಮಕ್ಕಳು ಭಾಗವಹಿಸಲು ನಿರ್ಧರಿಸಿದ್ದರು. ಆದರೆ ವಿಶೇಷ ಚೇತನ ಮಕ್ಕಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಆರ್ಥಿಕ ಸಮಸ್ಯೆ ಎದುರಾಗಿತ್ತು. ಈ ಹಿನ್ನಲೆಯಲ್ಲಿ 15ಕ್ಕೂ ಅಧಿಕ ವಿಶೇಷ ಚೇತನ ಮಕ್ಕಳು ನೆರವಿಗಾಗಿ ಶಾಸಕರ ಬಳಿ ಮನವಿ ಮಾಡಿದ್ದರು. ಶಾಸಕರು ತಕ್ಷನ ಸ್ಪಂದಿಸಿದ ಧನ ಸಹಾಯ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News