ಪ್ರಧಾನಿ ಮೋದಿ ಹುಟ್ಟುಹಬ್ಬ: ಐಸಿಯು ಘಟಕಕ್ಕೆ ನುಗ್ಗಿ ಹಣ್ಣು ವಿತರಿಸಿದ ಸಚಿವ !

Update: 2019-09-17 13:17 GMT

ಬೀದರ್, ಸೆ.17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆಯ ಐಸಿಯು ಘಟಕಕ್ಕೆ ನುಗ್ಗಿ ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ರೋಗಿಗಳಿಗೆ ಹಣ್ಣು ವಿತರಣೆ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮಂಗಳವಾರ ನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಅವರು, ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ರೋಗಿಗಳಿಗೆ ಹಣ್ಣು ಹಂಚುತ್ತಿದ್ದರು. ಈ ವೇಳೆ ಕೇವಲ ವಾರ್ಡ್‌ನಲ್ಲಿರುವ ರೋಗಿಗಳಿಗೆ ಹಣ್ಣುಗಳನ್ನು ಹಂಚದೆ, ಐಸಿಯುನಲ್ಲಿರುವ ರೋಗಿಗಳಿಗೂ ಹಣ್ಣುಗಳನ್ನು ಹಂಚಿದ್ದಾರೆ. ಈ ಮೂಲಕ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ರೋಗಿಗಳಿಗೆ ಸಚಿವರು ತೊಂದರೆ ಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಅಷ್ಟೇ ಅಲ್ಲದೆ, ತೀವ್ರ ನಿಗಾ ಘಟಕಕ್ಕೆ ಪಾದರಕ್ಷೆಗಳನ್ನು ಹಾಕಿಕೊಂಡು ಸಚಿವರು ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ವೇಳೆ ರೋಗಿಗಳ ಸಂಬಂಧಿಕರು ಆಕ್ಷೇಪ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News