ಮರಳು ದಿಬ್ಬ ತೆರವಿಗೆ ನಿರ್ಣಯ: ರಘುಪತಿ ಭಟ್

Update: 2019-09-17 16:33 GMT

ಉಡುಪಿ, ಸೆ.17: ಮರಳಿನ ಸಮಸ್ಯೆಗೆ ಸಂಬಂಧಿಸಿ ಇಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಏಳು ಜನರ ಸಮಿತಿ ಸಭೆಯಲ್ಲಿ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವ ಬಗ್ಗೆ ನಿರ್ಣಯ ಮಾಡ ಲಾಯಿತು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

  ಆ ಮೂಲಕ 158 ಜನ ಪರವಾನಿಗೆದಾರರಿಗೆ ಅನುಮತಿ ಸಿಕ್ಕಿದೆ. ನಾಳೆ ಯಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಈ ಲೀಸ್ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿರುವರು ಎಂದು ಅವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News