ಸೆ.22 ರಂದು ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

Update: 2019-09-17 17:36 GMT

ಬೆಂಗಳೂರು, ಸೆ.17: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊರರಾಜ್ಯ ಮಹಾರಾಷ್ಟ್ರ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನು ಸೆ.22ರಂದು ಬೆಳಗ್ಗೆ 10-30ಕ್ಕೆ ಸೊಲ್ಲಾಪುರದ ಅಕ್ಕಲಕೋಟಾ ರಸ್ತೆಯ ವೀರತಪಸ್ವಿ ಶಿಕ್ಷಣ ಸಂಕುಲದ ಸಭಾಂಗಣದಲ್ಲಿ ಆಯೋಜಿಸಿದೆ.

ಕರ್ನಾಟಕ ಸರಕಾರದ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮಹಾರಾಷ್ಟ್ರ ಸರಕಾರದ ಸಾರಿಗೆ ಸಚಿವರು ಹಾಗೂ ಸೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಸೊಲ್ಲಾಪುರದ ಸಂಸದ ಷ.ಬ್ರ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ಕಲಬುರ್ಗಿಯ ಸಂಸದ ಡಾ.ಉಮೇಶ್ ಜಿ.ಜಾದವ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸರಕಾರದ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಆರ್.ಜನ್ನು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮುದ್ದೇಬಿಹಾಳದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಅಫಜಲ್‌ಪುರದ ಶಾಸಕ ಮಾಲಿಕಯ್ಯ ಗುತ್ತೇದಾರ್, ಹಿರಿಯ ಪತ್ರಕರ್ತ ಸತ್ಯನಾರಾಯಣ ಬಿ.ಎಸ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News