ಹೊಸಂಗಡಿಯಲ್ಲಿ ವಾಹನ ಅಪಘಾತ: ಕಾಲೇಜು ವಿದ್ಯಾರ್ಥಿ ಗಂಭೀರ

Update: 2019-09-18 04:26 GMT

ಮಂಜೇಶ್ವರ, ಸೆ.18: ಬೈಕೊಂದು ಅಪಘಾತಕ್ಕೀಡಾಗಿ ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಗಾಯಾಳುವನ್ನು ಮಂಗಳೂರಿನ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿ ನೌಫಲ್ ಎಂದು ಗುರುತಿಸಲಾಗಿದ್ದು, ಈತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ನೌಫಲ್ ಸಂಚರಿಸುತ್ತಿದ್ದ ಬೈಕ್ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಇದರಿಂದ ಗಂಭೀರ ಗಾಯಗೊಂಡಿರುವ ನೌಫಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News