ಹೊಸಂಗಡಿ: ವಾಹನ ಅಪಘಾತದಿಂದ ಗಾಯಗೊಂಡ ವಿದ್ಯಾರ್ಥಿ ಮೃತ್ಯು
Update: 2019-09-18 06:14 GMT
ಮಂಜೇಶ್ವರ, ಸೆ.18: ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಮೃತಪಟ್ಟಿರುವುದು ವರದಿಯಾಗಿದೆ.
ಮೃತನನ್ನು ಮೃತ ಯುವಕನನ್ನು ಉಪ್ಪಳ ಸಮೀಪದ ಕುಬಣೂರಿನ ಅಬ್ದುಲ್ ರಹಿಮಾನ್ ಎಂಬವರ ಪುತ್ರ ನವಾಫ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನವಾಫ್ ಸಂಚರಿಸುತ್ತಿದ್ದ ಬೈಕ್ ಮತ್ತು ಸ್ಕೂಟರ್ ನಡುವೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ನವಾಫ್ ಮೇಲೆ ಲಾರಿಯೊಂದು ಹರಿದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ನವಾಫ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ನವಾಫ್ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಎಂದು ತಿಳಿದುಬಂದಿದೆ.