ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮ

Update: 2019-09-18 07:38 GMT

ಉಡುಪಿ, ಸೆ.18: ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಜಯಂಟ್ಸ್ ಸಪ್ತಾಹದ ಅಂಗವಾಗಿ ಎರಡನೆಯ ದಿನವಾದ ಬುಧವಾರ ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮ ನಡೆಯಿತು.

ಉಡುಪಿಯ ಸೈಂಟ್ ಸಿಸಿಲಿಸ್ ಕಾನ್ವೆಂಟ್ ನಲ್ಲಿ ನಡೆದ ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮವನ್ನು ಜಯಂಟ್ಸ್ ಕೇಂದ್ರ ಸಮಿತಿಯ ಸದಸ್ಯರಾದ ದಿನಕರ್ ಅಮೀನ್ ಮತ್ತು ಉಡುಪಿಯ ಖ್ಯಾತ ಆರ್ಥೋಪೆಡಿಕ್ ಸರ್ಜನ್ ಡಾ.ಸುರೇಶ್ ಶೆಣೈ ಜಂಟಿಯಾಗಿ ಉದ್ಘಾಟಿಸಿದರು.

 ಬಳಿಕ ಮಾತನಾಡಿದ ಡಾ.ಸುರೇಶ್ ಶೆಣೈ, ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಸಾಂದರ್ಭಿಕವಾಗಿ ಮಾತನಾಡಿದರು.

ಜಯಂಟ್ಸ್ ಯುನಿಟ್ ನಿರ್ದೇಶಕ ರಮೇಶ್ ಪೂಜಾರಿ, ಉಪಾಧ್ಯಕ್ಷ ಇಕ್ಬಾಲ್ ಮನ್ನಾ, ಡೈರೆಕ್ಟರ್ ಅಡ್ಮಿನಿಸ್ಟ್ರೇಶನ್ ಯಶವಂತ ಸಾಲ್ಯಾನ್, ನಿಕಟಪೂರ್ವ ಅಧ್ಯಕ್ಷ ಆನಂದ ಉದ್ಯಾವರ್, ಪೂರ್ವಾಧ್ಯಕ್ಷರಾದ ಜಗದೀಶ್ ಅಮೀನ್, ರಾಜೇಶ್ ಶೆಟ್ಟಿ, ಉಷಾ ರಮೇಶ್, ದೇವದಾಸ್ ಕಾಮತ್, ಪ್ರಭಾಕರ್ ಬಂಗೇರ, ಗಣೇಶ್ ಶೆಟ್ಟಿಗಾರ್ ಮತ್ತು ಜಯಂಟ್ಸ್ ನ ಇತರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜಯಂಟ್ಸ್ ಉಡುಪಿಯ ಅಧ್ಯಕ್ಷ ಬಿ.ಜಿ.ಲಕ್ಷ್ಮೀಕಾಂತ್ ಬೆಸ್ಕೂರ್ ಸ್ವಾಗತಿಸಿದರು. ಗಣೇಶ್ ಉರಾಳ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News